ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಪುಸ್ತಕ ವಿತರಣೆ
ಗಂಟುಬೀಳು: ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಮಕ್ಕಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.ಫೌಂಡೇಶನ್ ನ ಅಧ್ಯಕ್ಷರಾದ ಶ್ರೀಯುತ ಶಂಕರ್ ಐತಾಳ್ ಅವರು ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿದರು. ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚಿಸುವುದು ಮತ್ತು ಶೈಕ್ಷಣಿಕ ಸಾಧನಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಪುಸ್ತಕ ಪಡೆದ ಮಕ್ಕಳು ಸಂತಸ ವ್ಯಕ್ತಪಡಿಸಿದರು. ಶಾಲೆಯ ಆಡಳಿತ ಮಂಡಳಿಯು ಗೀತಾ ಹೆಚ್. ಎಸ್. ಎನ್. ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಸಿತು.

