*ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಮಂದಿ ಜ್ಞಾನದೀಪ ಶಿಕ್ಷಕರ ಸಂದರ್ಶನ ಪೃಕ್ರಿಯೆ

ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು *ಜ್ಞಾನ ದೀಪ ಶಿಕ್ಷಣ ಕಾರ್ಯಕ್ರಮ* ದಡಿಯಲ್ಲಿ 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಾದ್ಯಂತ 1000 ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕಾತಿ ನೀಡಿದ್ದು, *ಉಡುಪಿ ಜಿಲ್ಲೆಗೆ ಮಂಜೂರಾತಿ ಆದ 100 ಮಂದಿ ಜ್ಞಾನದೀಪ ಶಿಕ್ಷಕರ ಸಂದರ್ಶನ ಪೃಕ್ರಿಯೆ* ಈ ದಿನ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಸೌಧ ಕಟ್ಟಡದಲ್ಲಿ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಇವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.ಉಡುಪಿ ಜಿಲ್ಲೆಯ ನಿರ್ದೇಶಕರಾದ ನಾಗರಾಜ ಶೆಟ್ಟಿ ಉದ್ಘಾಟನೆ ಮಾಡಿ ಸಮುದಾಯಾಭಿವೃದ್ಧಿ ಕಾರ್ಯಕ್ರಮದ ಸಂಪೂರ್ಣ ವಿವರದ ಬಗ್ಗೆ ಮಾಹಿತಿ ನೀಡಿದರು.ಕೇಂದ್ರ ಕಛೇರಿಯ ಸಮುದಾಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಶೇಖರ್‌ ಜ್ಞಾನ ದೀಪ ಶಿಕ್ಷಕರ ಕರ್ತವ್ಯದ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ ಎಂ.ಐ.ಎಸ್.ಯೋಜನಾಧಿಕಾರಿ ಸ್ವಪ್ನ ಪ್ರಕಾಶ್‌, ಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ, ಬಾಲಕೃಷ್ಣ ಹಿರಿಂಜ, ಉಮೇಶ್‌, ಸುಧೀರ್‌, ರಮೇಶ್‌ ಪಿ.ಕೆ. ಮತ್ತು ತರಬೇತೆ ಸಂಸ್ಥೆಯ ಪ್ರಾಂಶುಪಾಲರಾದ ಅನಿತಾ ಶೆಟ್ಟಿ ಉಪಸ್ಥಿತರಿದ್ದು, ಸಂದರ್ಶನ ಪೃಕ್ರಿಯೆ ನಡೆಸಿದರು. ಜಿಲ್ಲಾ ಕಚೇರಿ ಪ್ರಬಂಧಕರಾದ , ಜ್ಯೋತಿ ಸ್ವಾಗತಿಸಿ, ಚೈತ್ರ ಕಾರ್ಯಕ್ರಮ ನಿರೂಪಣೆ ಮಾಡಿದ್ದು, ನಿತೇಶ್‌ ಧನ್ಯವಾದಗೈದರು ಅರ್ಪಿತಾ, ಸರೋಜಿನಿ, ಕೀರ್ತೀಕ್, ಯಶೋದಾ & ಕಿರಣ್‌ ಹಾಜರಿದ್ದರು.

Leave a Reply

Your email address will not be published. Required fields are marked *