ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ

*ಪ್ರತಿಭಾ ಪುರಸ್ಕಾರ* 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕು. ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು.

*ಕ್ರೀಡಾಸಮವಸ್ತ್ರ,ವಿಜ್ಞಾನ ಮಾಹಿತಿ ಪುಸ್ತಕ ವಿತರಣೆ*ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ ಸಮವಸ್ತ್ರ ಹಾಗೂ ವಿಜ್ಞಾನ ‌ಸಂಘಕ್ಕೆ ವಿಜ್ಞಾನ ಮಾಹಿತಿ ಪುಸ್ತಕಗಳನ್ನು ರೋಟರಿ ಕ್ಲಬ್ ನ ವತಿಯಿಂದ ವಿತರಿಸಲಾಯಿತು.ಮುಖ್ಯ ಶಿಕ್ಷಕ ಶ್ರೀ ಕೆ. ಸತೀಶ ಐತಾಳ ಸ್ವಾಗತಿಸಿದರು. ಕು.ಪ್ರಣತಿ ಕಾರ್ಯಕ್ರಮ ನಿರೂಪಿಸಿ. ಕು. ವೈಷ್ಣವಿ ವಂದಿಸಿದರು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ರೊ. ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು.ಇಂಟ್ರ್ಯಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕು. ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್ ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ರೊ.ಆನಂದ್ ಎಮ್, ಕ್ಲಬ್ ನ ಕಾರ್ಯದರ್ಶಿ ರೊ. ಕೆ. ರಾಜಾರಾಮ ಐತಾಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಜಾತ, ಶಿಕ್ಷಣ ತಜ್ಞ ಗಣೇಶ್ ಜಿ, ಸಮಿತಿ ಸದಸ್ಯರಾದ ಶ್ರೀಮತಿ ಸುಲತಾ ಎಸ್ ಹೆಗ್ಡೆ,ಇಂಟ್ರ್ಯಾಕ್ಟ್ ಮಾರ್ಗದರ್ಶಿ ಶಿಕ್ಷಕಿ ಶ್ರೀಮತಿ ಹೆಲೆನ್ ಬಾಂಝ್ ಹಾಗೂ ಹೆಚ್ಚಿನ ರೋಟರಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *