editor janatha

ಪಂಚವರ್ಣದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾದರಿ ಕಾರ್ಯ- ಆನಂದ್ ಸಿ ಕುಂದರ್

ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಅದರಲ್ಲೂ ಬಹುಮುಖ್ಯವಾಗಿ ಪುನಿತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ,ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಸೇವೆಯೇ…

Read More

ಪಾಂಡೇಶ್ವರ ಗ್ರಂಥಾಲಯದಿಂದ ವಿಶಿಷ್ಟ ಪರಿಸರ ದಿನಾಚರಣೆ: ಗಿಡ ಬೆಳೆಸಿದ ಮಕ್ಕಳಿಗೆ ಬಹುಮಾನ!

ಪಾಂಡೇಶ್ವರ: ಇಲ್ಲಿನ ‘ಅರಿವು ಕೇಂದ್ರ’, ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಜೂನ್ 5ರ ವಿಶ್ವ ಪರಿಸರ ದಿನಾಚರಣೆಯನ್ನು ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಗಿಡ ಸಾಕಿ ಪ್ರಶಸ್ತಿ ಗೆದ್ದ ವಿದ್ಯಾರ್ಥಿಗಳುಕಳೆದ ವರ್ಷದ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗಿದ್ದ ಗಿಡಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲನೆ-ಪೋಷಣೆ ಮಾಡಿ ಬೆಳೆಸಿದ ತರಗತಿಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕೇವಲ ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಜವಾಬ್ದಾರಿಯಿಂದ ಬೆಳೆಸುವುದನ್ನು…

Read More

ಹೆಮ್ಮಾಡಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಜೆಸಿಐ ಕುಂದಾಪುರ ಸಿಟಿ, ಹಳೆ ವಿದ್ಯಾರ್ಥಿ ಸಂಘ, ಸರಕಾರಿ ಮಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗ್ರಾಮ ಪಂಚಾಯತ್ ಹೆಮ್ಮಾಡಿ ಇವರುಗಳ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ, ವಿಶ್ವ ಪರಿಸರ ದಿನಾಚರಣೆ ಹಾಗು ವಿದ್ಯಾರ್ಥಿಗಳಿಗೆ ಸಸಿ ನೀಡುವ ಕಾರ್ಯಕ್ರಮ ನಡೆಯಿತು. ಈ ಪ್ರಪಂಚ ನಮ್ಮ ಪ್ರಕೃತಿಯ ಮಡಿಲು ಈ ಮಡಿಲ ಕಣ ಕಣವು ನಮ್ಮೆಲ್ಲರ ಜೀವಾಳದ ಉಸಿರೇ ಈ ಪರಿಸರ,ನಾವಿರೋತನಕ ಇದನ್ನು ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ, ಇದನ್ನು ನಿಷ್ಠೆಯಿಂದ ಪಾಲಿಸೋಣ,ಎಂದು ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ…

Read More

ಪ್ರಧಾನಿ ಮೋದಿ ಭಾರತಕ್ಕೆ ಮಾತ್ರವಲ್ಲ, ಪ್ರಪಂಚದ ಹೆಮ್ಮೆ : ಯಶಪಾಲ್ ಸುವರ್ಣ

ಮೋದಿಯವರ ಸಮರ್ಥ ಆಡಳಿತ, ಭಾರತವನ್ನು ಬಲಿಷ್ಠಗೊಳಿಸಿದೆ. ಅವರು ಕೈಗೊಂಡ ಅಭಿವೃದ್ಧಿಯ ಕಾರ್ಯಗಳನ್ನು ವಿಶ್ವವೇ ಬೆರಗಾಗಿ ನೋಡಿದೆ. ಮೋದಿಯವರು ದೇಶ ಮಾತ್ರವಲ್ಲ ಪ್ರಪಂಚದ ಹೆಮ್ಮೆ ಎಂಬುದಾಗಿ ಶಾಸಕ ಯಶಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ಜಿಲ್ಲೆಯ ಬಿಜೆಪಿ ಮತ್ತು ಜಿಲ್ಲಾ ರೈತ ಮೋರ್ಚಾ ವತಿಯಿಂದ ನೀಲಾವರ ಗೋಶಾಲೆಯಲ್ಲಿ ಜೂನ್ 5 ರಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ 12ವರ್ಷಗಳ ಅಭಿವೃದ್ಧಿ ಪರ ಆಡಳಿತದ ಅಭಿಯಾನ ಕಾರ್ಯಕ್ರಮದಲ್ಲಿ ಮಾತುಗಳನ್ನು ಆಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ…

Read More

ಇಂದು ನೀಲಾವರ ಗೋಶಾಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ12 ವರ್ಷದ ಆಡಳಿತ ಸಾಧನೆಯ ಅಭಿಯಾನ

ದಿನಾಂಕ 05/06/2026 ನೇ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನೀಲಾವರ ಗೋಶಾಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ 12 ವರ್ಷ ಆಡಳಿತದ ಸಾಧನೆಯ ಜಿಲ್ಲಾ ಮಟ್ಟದ ಅಭಿಯಾನದ ಉದ್ಘಾಟನಾ ಸಮಾರಂಭ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ಸಂಸದರು, ಶಾಸಕರು ಮತ್ತು ಪ್ರಮುಖರು ಭಾಗವಹಿಸುವರಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಉಪಸ್ಥಿತರಾಗಬೇಕಾಗಿ ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು, ಸಮಾಜ ಸೇವಕರೂ ಆದ ಕಮಲಾಕ್ಷ ಹೆಬ್ಬಾರ್ ಪೇತ್ರಿ ಮನವಿ ಮಾಡಿದ್ದಾರೆ

Read More

ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ

ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆ ಅಂಪಾರು – ಸಂಪ್ರದಾಯದ ಸೊಬಗಿನಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಶಿಕ್ಷಣದ ಪವಿತ್ರ ಪಯಣಕ್ಕೆ ಸಂಪ್ರದಾಯ ಮತ್ತು ಸಂಸ್ಕೃತಿಯ ಸೊಬಗು ಸೇರಿಸಿ, ಅಂಪಾರಿನ ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನೂತನ ಶೈಕ್ಷಣಿಕ ವರ್ಷದ ಆರಂಭ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮಗಳು ಅತ್ಯಂತ ವೈಭವ, ಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ನೆರವೇರಿದವು.ಜೂನ್ 1ರಂದು ಶಾಲಾ ಪುನರಾರಂಭದ ಅಂಗವಾಗಿ ನುಕ್ಯಾಡಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಗಣಹೋಮ ನೆರವೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ…

Read More

ನಮ್ಮ ಉಡುಪಿ ಯು ಚಾನೆಲ್ನಲ್ಲಿ ನೂತನ ಸುದ್ದಿ ವಿಭಾಗ ಜನತಾ ನ್ಯೂಸ್ ಅಸ್ತಿತ್ವಕ್ಕೆ

ಉಡುಪಿ ಜಿಲ್ಲೆಯ ಏಕೈಕ ಅಧಿಕೃತ ಟಿವಿ ಮಾಧ್ಯಮವಾದ ನಮ್ಮ ಉಡುಪಿ ಯು ಚಾನೆಲ್ನಲ್ಲಿ ನೂತನ ಸುದ್ಧಿ ವಿಭಾಗ ಜನತಾ ನ್ಯೂಸ್ ಜೂನ್ 3ರಂದು ಉಡುಪಿಯ ರಾಮಕೃಷ್ಣ ಹೋಟೆಲಿನಲ್ಲಿ ಉದ್ಘಾಟನೆಗೊಂಡಿತು. ಕೋಟ ಜನತಾ ಫಿಶ್ ಮಿಲ್ ಮತ್ತು ಆಯಿಲ್ ಪ್ರಾಡಕ್ಟ್ ಮಾಲಕ, ಗೀತಾನಂದ ಫೌಂಡೇಶನ್ ಪ್ರವರ್ತಕ, ಧರ್ಮರತ್ನಕರ, ಅಧುನಿಕ ಬಸವಣ್ಣ ಆನಂದ ಸಿ ಕುಂದರ್ ಅವರು ಜನತಾ ನ್ಯೂಸ್ ಅನ್ನು ಬಿಡುಗಡೆ ಮಾಡಿ, ಜನತಾ ಎಂಬುದು ನನ್ನ ಅಣ್ಣನ ಕನಸಿನ ಹೆಸರು. ಜನರಿಂದ ಜನರಿಗಾಗಿ ನಾವು ಜನತಾ ಸಂಸ್ಥೆಯನ್ನು…

Read More

ವರಂಗ ಪಂಚಾಯತ್ ಮಾಜಿ ಸದಸ್ಯರಾದ ಸಂತೋಷ್ ನಾಯ್ಕ್ ಅವರಿಗೆ ನುಡಿ ನಮನ

ವರಂಗ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ದಿ. ಸಂತೋಷ್ ನಾಯ್ಕ್ ಅವರ ನುಡಿ ನಮನ ಕಾರ್ಯಕ್ರಮವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು .ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಮಾತನಾಡಿ, ಸಮಾಜಮುಖಿ ಸೇವೆಗಳ ಮೂಲಕ ಜನಮನ ಗೆದ್ದಿದ್ದ ಸಂತೋಷ್ ನಾಯ್ಕ್ ಅವರ ಕೊಡುಗೆಯನ್ನು ಸ್ಮರಿಸಿದರು. ಅವರು ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿದ್ದು, ಅವರ ಕುಟುಂಬದ ಪರವಾಗಿ ಸಮಾಜವು ನಿಲ್ಲಬೇಕೆಂದು ಕರೆ ನೀಡಿದರು.ಸಭೆಯಲ್ಲಿ ಹಿಂದೂ ಹೆಲ್ಪ್‌ಲೈನ್ ಜನಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಡಾ. ಸುದರ್ಶನ್…

Read More

ಕೋಟ ಪಂಚವರ್ಣದಿಂದ ಜೂನ್ 4ರಂದು ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆ, ವಿದ್ಯಾ ಪರಿಕರ ವಿತರಣೆ

ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಶೈಕ್ಷಣಿಕ ದತ್ತು ಪಡೆದ ಹಾಗೂ ಫಲಾನುಭವಿ ವಿದ್ಯಾರ್ಥಿಗಳಿಗೆ ವಿದ್ಯಾ ಪರಿಕರ ವಿತರಣೆ ಕಾರ್ಯಕ್ರಮ ಜೂ.4ರ ಗುರುವಾರ ಸಂಜೆ 5.45ಕ್ಕೆ ಕೋಟದ ಸಮುದ್ಯತಾ ಸಭಾಂಗಣದಲ್ಲಿ ಜರಗಲಿದೆ.ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಹಾಪೋಷಕರಾದ ಆನಂದ್ ಸಿ ಕುಂದರ್ ಹಾಗೂ ಕೃಷ್ಣಪ್ರಸಾದ್ ಕ್ಯಾಶು,ಸ್ಟೀಲ್ ಇಂಡಸ್ಟ್ರೀಸ್ ಮಾಲಿಕ ಸಂಪತ್ ಕುಮಾರ್ ಶೆಟ್ಟಿ, ಸ್ನೇಹಕೂಟದ ಅಧ್ಯಕ್ಷೆ, ಸಲಹಾ ಸಮಿತಿ ಸದಸ್ಯೆ ಭಾರತಿ ಮಯ್ಯ ಸೇರಿದಂತೆ…

Read More

ಹೊಸಂಗಡಿ ಕೆರೆಕಟ್ಟೆ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ28ನೇ ವರ್ಷದ ಪ್ರತಿಷ್ಠ ವರ್ಧಂತಿ ಮತ್ತು ಬ್ರಹ್ಮಕಲಶೋತ್ಸವ ಸಂಪನ್ನ

ಶ್ರೀ ಶಾಂತೇಶ್ವರ ದೇವಸ್ಥಾನ ಕೆರೆಕಟ್ಟೆ, ಹೊಸಂಗಡಿಇದರ 28ನೇ ವರ್ಷದ ಪ್ರತಿಷ್ಠ ವರ್ಧಂತಿ ಮತ್ತು ಬ್ರಹ್ಮಕಲಶೋತ್ಸವ ಜೂನ್ 2ರಂದು ವೇ | ಮೂ | ಸೂರ್ಯನಾರಾಯಣ ಬಾಯರು, ಶಂಕರನಾರಾಯಣ ಇವರ ನೇತೃತ್ವದಲ್ಲಿ ನೆರವೇರಿತು. ಬೆಳಿಗ್ಗೆ ಪುಣ್ಯಾಹವಾಚನ, ಪಂಚವಿಂಶತಿಕಲಶ, ಬ್ರಹ್ಮಕುಂಭ ಸ್ಥಾಪನೆ, ಪ್ರಧಾನ ಕಲಾತತ್ವಾಧಿವಾಸ ಹೋಮ, ರುದ್ರಾಭಿಷೇಕ, ಹಾಗು ಮಹಾಮಂಗಳಾರತಿ ಪೂಜೆ ನಡೆಯಿತು.ಬಳಿಕ ಮಹಾ ಅನ್ನಸಂತರ್ಪಣೆ ನೆರೆವೇರಿತು.ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಡಳಿತ ಮುಕ್ತೆಸರರಾದ ಹೆಚ್. ರಾಮಕೃಷ್ಣ ಆಚಾರ್ಯ ಹಾಗು ಅರ್ಚಕರು. ಆಡಳಿತ ಮಂಡಳಿ ಸದಸ್ಯರು ಹಾಗು ಗ್ರಾಮಸ್ಥರು ಉಪಸ್ಥಿತಿ ಇದ್ದರು

Read More