*ಮಹಿಳೆಯರಿಗೆ ಕಾನೂನು ಅರಿವು ಅತ್ಯಗತ್ಯ: ಪದ್ಮಪ್ರಸಾದ್ ಜೈನ್*
ಅಜೆಕಾರು , ಜು. 5: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಅಜೆಕಾರು ಕೈಕಂಬದ ಶ್ರೀ ಮಹಾದೇವಿ ಭಜನಾ ಮಂಡಳಿ (ರಿ.) ಮಹಿಳಾ ಸದಸ್ಯರಿಗಾಗಿ ಕಾನೂನು ಮಾಹಿತಿ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ನ್ಯಾಯವಾದಿಗಳು ಹಾಗೂ ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪದ್ಮಪ್ರಸಾದ್ ಜೈನ್ ಅವರು ಮಹಿಳೆಯರ ಹಕ್ಕುಗಳು, ಕುಟುಂಬ ಸಂಬಂಧಿತ ಕಾನೂನುಗಳು, ಸೈಬರ್ ಅಪರಾಧಗಳು, ಆಸ್ತಿ ಹಕ್ಕು,…

