ಚೇತನಾ ಪ್ರೌಢಶಾಲೆ– ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವು ಇತ್ತೀಚೆಗೆ ನಡೆಯಿತು. ಇದೇ ಸಂದರ್ಭದಲ್ಲಿ ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಂಗಾರಕಟ್ಟೆ- ಸಾಸ್ತಾನ ರೋಟರಿ ಕ್ಲಬ್ಬಿನ ಅಧ್ಯಕ್ಷೆ ರೊ. ಕುಸುಮ ಮನೋಜ್ ಪದಪ್ರದಾನ ನಡೆಸಿಕೊಟ್ಟರು. ಚೇತನಾ ಇಂಟ್ರಾಕ್ಟ್ ನೂತನ ಅಧ್ಯಕ್ಷೆಕು. ನಮ್ರತಾಸದ್ರಿ ವರ್ಷದ ಯೋಜನೆಗಳನ್ನು ಪ್ರಸ್ತುತ ಪಡಿಸಿದರುರೋಟರಿ ಇಂಟ್ರ್ಯಾಕ್ಟ್ ಕೋ ಆರ್ಡಿನೇಟರ್ರೊ. ಸುಲತಾ ಹೆಗ್ಡೆ ಇಂಟ್ರ್ಯಾಕ್ಟ್ ಕ್ಲಬ್ ಚಟುವಟಿಕೆಗಳ ಮಾಹಿತಿ ನೀಡಿದರು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷಶ್ರೀ ಬಿ. ಭರತ್ಕುಮಾರ್…

Read More

ಸ್ಯಾಬ್ರ ಕಟ್ಟೆ: ನಿವೃತ ಹಿರಿಯ ಬ್ಯಾಂಕ್ ಅಧಿಕಾರಿ ಗಳಿಗೆ ಸನ್ಮಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ 32 ವರ್ಷಗಳ ಸುದೀರ್ಘ, ನಿಷ್ಠಾವಂತ ಹಾಗೂ ಜನಸ್ನೇಹಿ ಸೇವೆಯನ್ನು ಸಲ್ಲಿಸಿರುವ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಿವೃತ ರಾದ  ಹಿರಿಯ ಬ್ಯಾಂಕ್ ಅಧಿಕಾರಿ ಗಳಾದ ಕರುಣಾಕರ್ ದಾಸ್ ಮತ್ತು *ಪ್ರಬೋಧ್ ಚಂದ್ರ ಹೆಜಮಾಡಿ* ಅವರನ್ನು ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ (SCDCC Bank), ಸಾಹೇಬರಕಟ್ಟೆ ಶಾಖೆ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ *ಅಧ್ಯಕ್ಷತೆಯನ್ನು ಬಿ. ಪ್ರದೀಪ್ ಬಲ್ಲಾಳ್, ಅಧ್ಯಕ್ಷರು, ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ,…

Read More

ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಕ್ರೀಡಾ ಸಮವಸ್ತ್ರ ವಿತರಣೆ

*ಪ್ರತಿಭಾ ಪುರಸ್ಕಾರ* 2025-26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕು. ಅಮೃತಾ ಇವರಿಗೆ ನಗದು ಪುರಸ್ಕಾರ ನೀಡಲಾಯಿತು. *ಕ್ರೀಡಾಸಮವಸ್ತ್ರ,ವಿಜ್ಞಾನ ಮಾಹಿತಿ ಪುಸ್ತಕ ವಿತರಣೆ*ಶಾಲೆಯ ಖೋ ಖೋ ಪಂದ್ಯಾಟದ ಕ್ರೀಡಾಳುಗಳಿಗೆ ಸಮವಸ್ತ್ರ ಹಾಗೂ ವಿಜ್ಞಾನ ‌ಸಂಘಕ್ಕೆ ವಿಜ್ಞಾನ ಮಾಹಿತಿ ಪುಸ್ತಕಗಳನ್ನು ರೋಟರಿ ಕ್ಲಬ್ ನ ವತಿಯಿಂದ ವಿತರಿಸಲಾಯಿತು.ಮುಖ್ಯ ಶಿಕ್ಷಕ ಶ್ರೀ ಕೆ. ಸತೀಶ ಐತಾಳ ಸ್ವಾಗತಿಸಿದರು. ಕು.ಪ್ರಣತಿ ಕಾರ್ಯಕ್ರಮ ನಿರೂಪಿಸಿ. ಕು. ವೈಷ್ಣವಿ ವಂದಿಸಿದರು. ರೋಟರಿ ಕ್ಲಬ್ ಹಂಗಾರಕಟ್ಟೆ…

Read More

ಸರಕಾರಿ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ – ಇಂಟ್ರ್ಯಾಕ್ಟ್ ಕ್ಲಬ್ ಪದಪ್ರದಾನ.

ಸಾಸ್ತಾನ: ಸರಕಾರೀ ಪ್ರೌಢಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಪ್ರವತಿ೯ತ 2026-27ನೇ ಸಾಲಿನ ಇಂಟ್ರ್ಯಾಕ್ಟ್ ಕ್ಲಬ್ ನ ಪದಪ್ರದಾನ ಸಮಾರಂಭವುಇತ್ತೀಚೆಗೆ ನಡೆಯಿತು. ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ರೊ. ಕುಸುಮಾ ಮನೋಜ್ ಅಧ್ಯಕ್ಷತೆ ವಹಿಸಿದ್ದರು.ಇಂಟ್ರ್ಯಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಕು. ಕೌಸಲ್ಯಾ ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲಾ ಡಯಟ್ ನ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಇಂಟ್ರ್ಯಾಕ್ಟ್ ಕೋ ಆಡಿ೯ನೇಟರ್ ರೊ.ಆನಂದ್ ಎಮ್, ಕ್ಲಬ್ ನ ಕಾರ್ಯದರ್ಶಿ ರೊ….

Read More

ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿ: ಸಂಸದ ಕೋಟಾ

ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ದೇವರು ನೀಡಿದ ಪ್ರಕೃತಿ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು . ಅನ್ನಪೂರ್ಣ ನರ್ಸರಿಯ ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಮೃದ್ಧಿ ಮಹಿಳಾ ಮಂಡಳಿ, ಪೇತ್ರಿ ಲಯನ್ಸ್ ಕ್ಲಬ್ ಮತ್ತು ಸೈಂಟ್ ಪೀಟರ್ ಚರ್ಚ್ ಸಹಭಾಗಿತ್ವದಲ್ಲಿ ಪೇತ್ರಿ ರಸ್ತೆಯ ವಿಭಜಕದಲ್ಲಿ ಸುಮಾರು 1000 ಗಿಡ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕರಾದ ಯಶಪಾಲ್ ಎ ಸುವರ್ಣ ಇವರು ಪ್ರಧಾನಿ ನರೇಂದ್ರ…

Read More

ಪಾರಂಪಳ್ಳಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ಇವರಿಂದ ಗುಡ್ಡೆ ಶಾಲೆ ಮಕ್ಕಳಿಗೆ ಕಲಿಕಾ ಪರಿಕರಗಳ ಹಸ್ತಾಂತರ

ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ (ರಿ ).ಪಾರಂಪಳ್ಳಿ ಪಡುಕೆರೆ ಇವರಿಂದ ಸತತ 14 ನೆ ವರ್ಷ ಉಚಿತ ನೋಟ್ ಬುಕ್ ಹಾಗೂ ಕಲಿಕೆ ಪರಿಕರಗಳನ್ನು ಗುಡ್ಡೆ ಶಾಲೆ ಮಕ್ಕಳಿಗೆ ಉಚಿತವಾಗಿ ನೀಡಲಾಯಿತು.ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಶೇಷ ಐತಾಳ ವಹಿಸಿದ್ದರು. ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬಿನ ಗೌರವ ಅಧ್ಯಕ್ಷರಾದ ರಾಜೇಶ್ ಉಪಾಧ್ಯ, ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಕಾರ್ಯದರ್ಶಿ ಸುಧಾಕರ್ ಪೂಜಾರಿ ಸೇರಿದಂತೆ ಕೃಷ್ಣ. ಪಿ.,ಸುಧೀರ್ ಪೂಜಾರಿ, ಉಲ್ಲಾಸ್ ಪೂಜಾರಿ ಹಾಗೂ ಮುಖ್ಯ ಅತಿಥಿ ಯಾಗಿ ಅಶೋಕ್ ಸೋಮಯಾಜಿ ಅವರು…

Read More

ಪಂಚವರ್ಣದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮಾದರಿ ಕಾರ್ಯ- ಆನಂದ್ ಸಿ ಕುಂದರ್

ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ ಅದರಲ್ಲೂ ಬಹುಮುಖ್ಯವಾಗಿ ಪುನಿತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ,ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಮಾಜಸೇವೆಯೇ…

Read More

ಪಾಂಡೇಶ್ವರ ಗ್ರಂಥಾಲಯದಿಂದ ವಿಶಿಷ್ಟ ಪರಿಸರ ದಿನಾಚರಣೆ: ಗಿಡ ಬೆಳೆಸಿದ ಮಕ್ಕಳಿಗೆ ಬಹುಮಾನ!

ಪಾಂಡೇಶ್ವರ: ಇಲ್ಲಿನ ‘ಅರಿವು ಕೇಂದ್ರ’, ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಆಶ್ರಯದಲ್ಲಿ ಜೂನ್ 5ರ ವಿಶ್ವ ಪರಿಸರ ದಿನಾಚರಣೆಯನ್ನು ಪಾಂಡೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಗಿಡ ಸಾಕಿ ಪ್ರಶಸ್ತಿ ಗೆದ್ದ ವಿದ್ಯಾರ್ಥಿಗಳುಕಳೆದ ವರ್ಷದ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗಿದ್ದ ಗಿಡಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲನೆ-ಪೋಷಣೆ ಮಾಡಿ ಬೆಳೆಸಿದ ತರಗತಿಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕೇವಲ ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಜವಾಬ್ದಾರಿಯಿಂದ ಬೆಳೆಸುವುದನ್ನು…

Read More

ಪ್ರಧಾನಿ ಮೋದಿ ಭಾರತಕ್ಕೆ ಮಾತ್ರವಲ್ಲ, ಪ್ರಪಂಚದ ಹೆಮ್ಮೆ : ಯಶಪಾಲ್ ಸುವರ್ಣ

ಮೋದಿಯವರ ಸಮರ್ಥ ಆಡಳಿತ, ಭಾರತವನ್ನು ಬಲಿಷ್ಠಗೊಳಿಸಿದೆ. ಅವರು ಕೈಗೊಂಡ ಅಭಿವೃದ್ಧಿಯ ಕಾರ್ಯಗಳನ್ನು ವಿಶ್ವವೇ ಬೆರಗಾಗಿ ನೋಡಿದೆ. ಮೋದಿಯವರು ದೇಶ ಮಾತ್ರವಲ್ಲ ಪ್ರಪಂಚದ ಹೆಮ್ಮೆ ಎಂಬುದಾಗಿ ಶಾಸಕ ಯಶಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ಜಿಲ್ಲೆಯ ಬಿಜೆಪಿ ಮತ್ತು ಜಿಲ್ಲಾ ರೈತ ಮೋರ್ಚಾ ವತಿಯಿಂದ ನೀಲಾವರ ಗೋಶಾಲೆಯಲ್ಲಿ ಜೂನ್ 5 ರಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ 12ವರ್ಷಗಳ ಅಭಿವೃದ್ಧಿ ಪರ ಆಡಳಿತದ ಅಭಿಯಾನ ಕಾರ್ಯಕ್ರಮದಲ್ಲಿ ಮಾತುಗಳನ್ನು ಆಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ…

Read More

ಶಿಕ್ಷಣದಿಂದ ಮಾತ್ರ ಸಮಾಜವನ್ನು ಮುಂದೆ ತರಲು ಸಾಧ್ಯ: ಅಕ್ಷರದಕ್ಕರೆ ಕಾರ್ಯಕ್ರಮದಲ್ಲಿ ಧರ್ಮ ರತ್ನಾಕರ ಕೋಟ ಆನಂದ ಸಿ ಕುಂದರ್

ಶಿಕ್ಷಣದಿಂದ ಸಮಾಜವನ್ನು ಮುಂದೆ ತರಲು ಸಾಧ್ಯ. ಶಿಕ್ಷಣವನ್ನು ಕದಿಯಲು ಸಾಧ್ಯವಿಲ್ಲ. ಅದಕ್ಕೆ ಮಹತ್ವ ನೀಡಬೇಕು. ಜಾತಿ ಮತ ಭೇದ ಇಲ್ಲದೆ ಶಿಕ್ಷಣ ಎಲ್ಲರಿಗೂ ಸಿಗಲಿ. ದಸಂಸದ ಇಂತಹ ಕಾರ್ಯ ನಿರಂತರವಾಗಿ ಸಾಗಲಿ ಎಂದು ಧರ್ಮ ರತ್ನಾಕರ, ಅಧುನಿಕ ಬಸವಣ್ಣ ಉದ್ಯಮಿ ಕೋಟ ಆನಂದ ಸಿ ಕುಂದರ್ ಹೇಳಿದರು. ಅವರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಕೋಟ ಸಿ ಎ ಬ್ಯಾಂಕ್ನಲ್ಲಿ ಮೇ .30ರಂದು ನಡೆದ ಅಕ್ಷರದಕ್ಕರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ನಾಗರಾಜ…

Read More