ಹೆಬ್ರಿ ಸಂತೆಕಟ್ಟೆಯಲ್ಲಿ 2096ನೇ ಮದ್ಯವರ್ಜನ ಶಿಬಿರ ಯಶಸ್ವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಹೆಬ್ರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ (ಕ್ಷೇಮ), ಪ್ರಾಥಮಿಕ ಆರೋಗ್ಯ ಕೇಂದ್ರ ಕರ್ಜೆ, ಆರಕ್ಷಕ ಠಾಣೆ ಹೆಬ್ರಿ, ಗ್ರಾಮ ಪಂಚಾಯಿತಿ 38ನೇ ಕಳ್ತೂರು, ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ…

Read More

ಜುಲೈ ೨೬ ರಂದು ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೫ನೇ ಆರಾಧನಾ ಮಹೋತ್ಸವ

ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೨೬ರಂದು ಮುದ್ರಾಡಿ ಶ್ರೀ ಆದಿಶಕ್ತಿ ಕ್ಷೇತ್ರವನ್ನು ಬೆಳಗಿಸಿದ ಧರ್ಮಯೋಗಿ ಮೋಹನ ಸ್ವಾಮೀಜಿಯವರ ೫ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಬೆಳಿಗ್ಗೆ ೬:೩೦ ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಶ್ರೀ ಕೃಷ್ಣ ಸಂಧಾನ ನಡೆಯಲಿದೆ. ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಚೆಂಡೆ ಕೌಶಿಕ್‌ ರಾವ್‌,…

Read More

ಹೆಬ್ರಿ ತಾಲೂಕು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂಸೇವಕರ ತರಬೇತಿ ಕಾರ್ಯಗಾರ

ಹೆಬ್ರಿ : ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ತಂಡದ ಕೆಲಸವು ಸೇವಾ ಮನೋಭಾವದಿಂದ ಕೂಡಿದ್ದು,ಯಾವುದೇ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಸದಾ ಸೇವೆಗೆ ಸಿದ್ದ ಎನ್ನುವ ಭಾವನೆಯಿಂದ ದುಡಿಯುತ್ತಿರುವ ಸದಸ್ಯರ ಶಕ್ತಿಯನ್ನು ಮೆಚ್ಚುವಂತದ್ದು,. ತಾವು ಮಾಡುವ ಈ ಸೇವೆಯು ದೇಶಸೇವೆಗೆ ಸಮಾನವಾದದು, ಸೈನಿಕನು ಗಡಿಯನ್ನು ರಕ್ಷಿಸಿದರೆ ಸೇವಾ ಮನೋಭಾವವನ್ನು ಹೊಂದಿರುವ ಶೌರ್ಯ ತಂಡದ ಸದಸ್ಯರು ತಮ್ಮ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ತಮ್ಮಸೇವೆಯ ಮೂಲಕ ಸಮಾಜವನ್ನು ಸರಿಪಡಿಸುತ್ತಿದ್ದೀರಿ. ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್…

Read More

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇದಿಕೆ ಉದ್ಘಾಟನೆ  ಹಾಗೂ ಗುರುನಮನಕಾರ್ಯಕ್ರಮ:

ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ಹಾಗೂ ಸಂಸ್ಥೆಯಲ್ಲಿ ಗರಿಷ್ಠ ಅಂಕಗಳಿಸಿದ ಸುಮಾರು 60 ವಿದ್ಯಾರ್ಥಿಗಳ ಮತ್ತು ‌ಎನ್ ಎಂ ಎಂ ಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಎಂಟು ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವು ಮುನಿಯಾಲಿನ‌ ಶ್ರೀ ಪದ್ಮಾವತಿ ಕಲ್ಯಾಣ ಮಂದಿರದಲ್ಲಿ ನಡೆಯಿತು.‌ ವಿವಿಧ ವಿಷಯಗಳಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.‌ಇದೇ…

Read More

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ – ಪದ್ಮಪ್ರಸಾದ್‌ ಜೈನ್‌

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಯೊಬ್ಬರೂ ಪರಿಸರದ ಕುರಿತು ಕಾಳಜಿ ವಹಿಸುವುದು ಅವಶ್ಯ ಎಂದು ಎಸ್‌ಕೆಪಿಎ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಅಭಿಪ್ರಾಯಪಟ್ಟರು. ಅವರು ಜೂ. 10ರಂದು ಪಡುಕುಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯ ವತಿಯಿಂದ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರ ನಾಶದಿಂದ ವಾತಾವರಣದ ಮೇಲೆ ಭಾರಿ ಪರಿಣಾಮ ಬೀರುತ್ತಿದ್ದು ಹಮಾಮಾನ ವೈಪರೀತ್ಯವಾಗುತ್ತಿದೆ. ಜಾಗತಿಕ ತಾಪಮಾನ ಏರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಿಸರದ ಕುರಿತು ವ್ಯಾಪಕ…

Read More

ಹೆಬ್ರಿ ಪಂಚಾಯತ್ನಲ್ಲಿ ಪರಿಸರ ದಿನಾಚರಣೆ

ಹೆಬ್ರಿ ಪಂಚಾಯತ್ ನಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಶೇಷ ಗ್ರಾಮ ಸಭೆಯಲ್ಲಿ ಹೆಬ್ರಿ ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರಾದ ದಿನೇಶ್ ಎ. ಡಿ ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಗೆ ನಾವು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆಗಳ ಬಗ್ಗೆ ಹಾಗೂ ಪ್ಲಾಸ್ಟಿಕ್ ಮಿತ ಬಳಕೆಯ ಬಗ್ಗೆ ತಿಳಿಸಿದರು.ಪಂಚಾಯತ್ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯ ಮಹತ್ವ ವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯವರಾದ ಸದಾನಂದ ಸೆರ್ವೇಗಾರ್ ರವರು ತಿಳಿಸಿದರು.

Read More

ಗಂಟುಬೀಳು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಗಂಟುಬೀಳು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗಂಟುಬೀಳು ಇಲ್ಲಿ ನಿಸರ್ಗ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ಶಾಲಾ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಮಕ್ಕಳಿಗೆ ತಿಳಿಸುವುದರ ಜೊತೆಗೆ, ಭವಿಷ್ಯದಲ್ಲಿ ಪರಿಸರದ ಬಗ್ಗೆ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಗಿಡ ನೆಡುವ…

Read More

ವರಂಗ ಪಂಚಾಯತ್ ಮಾಜಿ ಸದಸ್ಯರಾದ ಸಂತೋಷ್ ನಾಯ್ಕ್ ಅವರಿಗೆ ನುಡಿ ನಮನ

ವರಂಗ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ದಿ. ಸಂತೋಷ್ ನಾಯ್ಕ್ ಅವರ ನುಡಿ ನಮನ ಕಾರ್ಯಕ್ರಮವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು .ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಮಾತನಾಡಿ, ಸಮಾಜಮುಖಿ ಸೇವೆಗಳ ಮೂಲಕ ಜನಮನ ಗೆದ್ದಿದ್ದ ಸಂತೋಷ್ ನಾಯ್ಕ್ ಅವರ ಕೊಡುಗೆಯನ್ನು ಸ್ಮರಿಸಿದರು. ಅವರು ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿದ್ದು, ಅವರ ಕುಟುಂಬದ ಪರವಾಗಿ ಸಮಾಜವು ನಿಲ್ಲಬೇಕೆಂದು ಕರೆ ನೀಡಿದರು.ಸಭೆಯಲ್ಲಿ ಹಿಂದೂ ಹೆಲ್ಪ್‌ಲೈನ್ ಜನಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಡಾ. ಸುದರ್ಶನ್…

Read More

ಗಂಟುಬೀಳು ಶಾಲೆಯಲ್ಲಿ ಬಣ್ಣ ಬಳಿದು ಚಿಣ್ಣರಿಗೆ ಸ್ವಾಗತ

ಕುಂದಾಪುರ ವಲಯದ ಆರ್ಡಿ ಅಲ್ಬಾಡಿ ಕ್ಲಸ್ಟರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶವಾದ ಗಂಟುಬೀಳು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 1ರಂದು ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ ಶಿಕ್ಷಕ ಮಹಾಸಭೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಂಜಿತ್ ಇವರು ವಹಿಸಿಕೊಂಡರು .ಉಪಾಧ್ಯಕ್ಷೆ ರೇಣುಕಾ ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಶಾರದಾ ಸ್ವಾಗತಿಸಿದರು. ಶಿಕ್ಷಕ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿಗಳು ಕೈ ಗೆ ಬಣ್ಣ ಬಳಿದು ಚಿತ್ತಾರ ಬರೆದು ಮೊದಲ ದಿನ ಸಂಭ್ರಮಿಸಿದರು. ಹಾಗೆಯೇ welcome board ನಲ್ಲಿ ವಿದ್ಯಾರ್ಥಿಗಳ ಫೋಟೋ ತೆಗೆದು…

Read More